34.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮೇ 13 ರಂದು ರಾತ್ರಿ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ, ಕಿಲಮರಿತ್ತಾಯ ನೇಮ, ಧ್ವಜಾರೋಹಣ, ಮೇ 14 ರಂದು ಪೂರ್ವಾಹ್ನ ಪುಣ್ಯಾಹ, ಶಾಂತಿ ಹವನಗಳು, 12ಕಾಯಿ ಗಣಯಾಗ, ರಾತ್ರಿ ಜೋಡು ನೇಮ, ಕುದುರುಮುಖ ದೈವದ ನೇಮ, ಉಗ್ರಾಣ ತುಂಬಿಸುವುದು, ಅಂಕುರಾರ್ಪಣೆ, ದೇವರ ಉತ್ಸವ ಪ್ರಾರಂಭ, ಅಶ್ವತ್ಥಕಟ್ಟೆ ಪೂಜೆ, ಮೇ.15 ಪೂರ್ವಾಹ್ನ ಅಂಗಣೋತ್ಸವ, ರಾತ್ರಿ ದೇವರ ಉತ್ಸವ, ಬೆಳ್ಳಿ ಕಟ್ಟೆ ಪೂಜೆ, ಮೇ16 ರಂದು ಪೂರ್ವಾಹ್ನ ಅಂಗಣೋತ್ಸವ, ರಾತ್ರಿ ಉತ್ಸವ, ಸವಾರಿ ಮಂಟಪ ಕಟ್ಟೆ ಪೂಜೆ, ಮೇ 17 ಪೂರ್ವಾಹ್ನ ಅಂಗಣೋತ್ಸವ , ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಅಂಗಣೋತ್ಸವ, ಬಂಗರಕಟ್ಟೆ ಪೂಜೆ, ರಾತ್ರಿ 11 ರಿಂದ ಬೆಳಗಿನ ತನಕ ತುಳು ಯಕ್ಷಗಾನ ನಡೆಯಲಿದೆ.


ಮೇ 18 ರಂದು ಪೂರ್ವಾಹ್ನ ಅಂಗಣೋತ್ಸವ ರಾತ್ರಿ ಮಹಾ ರಥೋತ್ಸವ, ಕವಾಟ ಬಂಧನ , ಮೇ. 19 ರಂದು ಕವಾಟೋದ್ಘಾಟನೆ , ಮಹಾಪೂಜೆ ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭೃತೋತ್ಸವ, ಧ್ವಜ ಅವರೋಹಣ, ಮೇ 20 ರಂದು ಪೂರ್ವಾಹ್ನ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ ನಡೆಯಲಿದೆ.


ಮೇ.21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. ತಿಳಿಸಿದ್ದಾರೆ.

Related posts

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!