23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!