23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya
error: Content is protected !!