ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya
error: Content is protected !!