25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಇಂದು ಸಂಜೆ ಚಿರನಿದ್ರೆಗೆ ಜಾರಿದ್ದು, ಅವರ ಪ್ರಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನ ನಾಳೆ ಮೇ 9ರಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ನಡೆಯಲಿದೆ.

ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಐದು ಅವಧಿಗೆ ಸೇವೆ ಸಲ್ಲಿಸಿ, ತಾಲೂಕಿನ ಅಭಿವೃದ್ಧಿಗೆ ವಿಶೇಷ ಕೊಡುಗೆಯನ್ನು ಬಂಗೇರರು ನೀಡಿದ್ದರು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳಿಂದ ಸ್ಪರ್ಧಿಸಿ ಚುನಾಯಿತರಾದ ಏಕೈಕ ಶಾಸಕ ಬಂಗೇರರು, ರಾಜಕೀಯ, ಧಾರ್ಮಿಕ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಂಗೇರರು, ಶ್ರೀ ಗುರುದೇವ ಪದವಿ ಪೂರ್ವ ಹಾಗೂ ಪದಪಿ ಕಾಲೇಜನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಆನೇಕ ಮಂದಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಅಸೌಖ್ಯಕ್ಕೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರರು ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆಂದು ವರದಿಯಾಗಿದೆ. ಬಂಗೇರರ ಪಾರ್ಥಿವ ಶರೀರವನ್ನು ಇಂದು ರಾತ್ರಿ 3 ಗಂಟೆಗೆ ಬೆಳ್ತಂಗಡಿಯ ಹಳೆಕೋಟೆಯ ಮನೆಗೆ ತರುವ ಸಾಧ್ಯತೆಗಳಿದ್ದು, ನಾಳೆ ಬೆಳಿಗ್ಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

Related posts

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya
error: Content is protected !!