24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು

.ಮೃತರು ಪತ್ನಿ ಸುಮಾ ಆರ್.ಆಚಾರ್,ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆ‌ರ್.,ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆ‌ರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.ಡಾ| ಪಾಲ್ತಾಡಿಯವರ ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಮೇ 8ರಂದು ಅಂತ್ಯ ಕ್ರಿಯೆ ನಡೆಯಲಿದೆ.

Related posts

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!