ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಇಂದಬೆಟ್ಟು ವಲಯದ ನಾವೂರು ಎಂಬಲ್ಲಿನ ಆಯಿಷಾರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಔಟ್ ಸೈಡ್ ವೀಲ್ ಚಯರ್ ಒಕ್ಕೂಟದ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ನಾವೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಸುನಂದ, ನಾವೂರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸರೋಜಾ, ಒಕ್ಕೂಟದ ಕಾರ್ಯದರ್ಶಿ ವಸಂತ , ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾಪ್ರತಿನಿಧಿ ಶ್ರೀಮತಿ ಸುನಿತಾ ಉಪಸ್ಥಿತರಿದ್ದರು.

Leave a Comment

error: Content is protected !!