23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!