September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!