25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya
error: Content is protected !!