ಬೆಳ್ತಂಗಡಿ : ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರ ನಿಧನ ಸುದ್ದಿ ನೋವು ತಂದಿದೆ.
ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆ ರಾಜಕೀಯ ಕ್ಷೇತ್ರಕ್ಕೆ ಹಾಗೂ ಬೆಳ್ತಂಗಡಿ ಜನತೆಗೆ ತುಂಬಲಾರದ ನಷ್ಟ. ರಾಜ್ಯದ ಸಚೇತಕರಾಗಿ, ಶಾಸಕರಾಗಿ ಅವರು ಸಲ್ಲಿಸಿದ ಸೇವೆ ಸದಾ ನೆನಪಿನಲ್ಲಿ ಉಳಿಯುವಂತಹದ್ದು ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ಹಾಗೂ ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.











