ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಘಟನೆ ಮೇ.8 ರಂದು ಮಧ್ಯಾಹ್ನ ನಡೆದಿದೆ.

ಬಸ್ಸು ನಲ್ಲಿದ್ದ 15 ಜನ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವೇಳೆ ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಶ್ವೇತಾ ವೈನ್ಸ್ ಮಾಲಕ ಪ್ರಶಾಂತ್ ಹಾಗೂ ಇತರ ಅಂಗಡಿ ಮಾಲೀಕರು, ಸ್ಥಳಿಯರು ಗಾಯಾಳುಗಳನ್ನು ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು..

ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬುಪುರ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!