23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya
error: Content is protected !!