22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

Suddi Udaya
error: Content is protected !!