24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಬೆಳ್ತಂಗಡಿ:ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದು ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದ್ದು.   ಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಯು ಗುರುನಾರಾಯಣ ಸಭಾ ಭವನದಲ್ಲಿ ನಡೆಯಿತು.

ಬೆಳಿಗ್ಗೆ 10.30 ಗಂಟೆಗೆ ಹಳೇಕೋಟೆ  ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ  ಪಾರ್ಥಿವ ಶರೀರವನ್ನು  ತಂದು   ಸಾರ್ವಜನಿಕರಿಗೆ ತಾಲೂಕು  ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಸಂಜೆ ಬೆಳ್ತಂಗಡಿ ನಗರದಲ್ಲಿ   ಪಾರ್ಥಿವ ಶರೀರದ ಅಂತಿಮ ಯಾತ್ರೆಯ ಮೆರವಣಿಗೆಯು ನಡೆಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ..ನಂತರ    ಅಂತ್ಯ ಸಂಸ್ಕಾರ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ನಡೆಯಲಿದೆ . ಮೃತರ ಗೌರವಾರ್ಥ ನಗರದ ಹೋಟೆಲ್ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಅವರ ಅಭಿಮಾನಿಗಳು  ವಿನಂತಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿ  ಉಪ ಮುಖ್ಯ ಮಂತ್ರಿ  ಸೇರಿದಂತೆ ಸಚಿವರು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!