September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

ಬೆಳ್ತಂಗಡಿ: ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿ, ದಕ್ಷಿಣ ಕನ್ನಡದ ಅಜಾತಶತ್ರು, ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ, ಹಲವು ಮಹತ್ತರ ಯೋಜನೆಗಳನ್ನು ತಂದ, ರಾಜಕಾರಣದಲ್ಲಿ ಮಾದರಿ ವ್ಯಕ್ತಿಯಾಗಿ ಬೆಳೆದು, ಮುಂದಿನ ಯುವ ರಾಜಕಾರಣಿಗಳಿಗೆ ಸ್ಫೂರ್ತಿಯ ಚಿಲುಮೆಯಾಗಿ, ಪ್ರೇರಣಾದಾಯಿಯಾಗಿ, ಆದರ್ಶಪ್ರಾಯಾರಾಗಿ, ನಿಲ್ಲಬಲ್ಲ ನೇರ ನಡೆ ನುಡಿಯ, ಪ್ರಾಮಾಣಿಕ, ಪ್ರಖರ ಮಾತಿನ ಮಲ್ಲ, ಬೆಳ್ತಂಗಡಿಯ ಗಂಡೆದೆಯ ನಾಯಕ ರಾಗಿದ್ದ ಹಿರಿಯರಾದ ಕೆ.ವಸಂತ ಬಂಗೇರ ನಿಧನದ ಸುದ್ದಿ ಅತೀವ ನೋವು ತಂದಿದೆ.

ಬೆಳ್ತಂಗಡಿ ತಾಲೂಕಿಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಬೆಳ್ತಂಗಡಿಗೆ ತುಂಬಲಾರದ ನಷ್ಟ. ಹಿರಿಯರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಭಾರತೀಯ ಮಾಜ್ದೂರು ಸಂಘ ದಕ ಜಿಲ್ಲಾಧ್ಯಕ್ಷ, ನ್ಯಾಯವಾದಿ ಅನಿಲ್ ಕುಮಾರ್ ಯು ಸಂತಾಪ ಸೂಚಿಸಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

Suddi Udaya
error: Content is protected !!