25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!