July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya
error: Content is protected !!