22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!