23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!