23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

ಬೆಳ್ತಂಗಡಿ: ಕಾರಿನಲ್ಲಿ ಮಲಗಿದ್ದವರ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಸಂಶುದ್ದೀನ್ ಎಂಬುವವರು ಕಳೆದ ಮೇ 3ರಂದು ರಾತ್ರಿ ತನ್ನ ಕಾರಿನಲ್ಲಿ ಅನಾಸ್ ಎಂಬವರೊಂದಿಗೆ ಮೂಡಿಗೆರೆ ಪಟ್ಟಣದ ಹ್ಯಾಂಡ್‌ಪೋಸ್ಟ್‌ಗೆ ಬಾಳೆಕಾಯಿ ಖರೀದಿಗೆ ತೆರಳಿದ್ದರು. ಮಾರ್ಗಮಧ್ಯೆ ಕೊಟ್ಟಿಗೆಹಾರದಲ್ಲಿ ಕಾರು ಚಾಲಕ ಸಂಶುದ್ದೀನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಕಾರನ್ನು ನಿಲ್ಲಿಸಿ ವಿಶ್ರಾಂತಿ ಪಡೆಯಲು ಕಾರಿನಲ್ಲೇ ಮಲಗಿದ್ದರು. ಮಧ್ಯರಾತ್ರಿ ಕಾರಿನ ಬಳಿಗೆ 4 ಬೈಕ್‌ಗಳಲ್ಲಿ ಬಂದ 8 ಮಂದಿ ಯುವಕರ ಗುಂಪು ದಿಢೀರ್ ಕಾರಿನ ಮೇಲೆ ದಾಳಿ ಮಾಡಿ ಬಾಟಲಿ, ಕಲ್ಲು, ರಾಡ್‌ಗಳಿಂದ ಕಾರಿನ ಗ್ಲಾಸ್ ಒಡೆದು ಹಾಕಿದ್ದಲ್ಲದೇ ಕಾರಿನೊಳಗಿದ್ದ ಸಂಶುದ್ದೀನ್ ಹಾಗೂ ಅನಾಸ್ ಅವರಿಗೆ ಹಲ್ಲೆ ಮಾಡಿದ್ದಾರೆ.

ಈ ವೇಳೆ ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿದ್ದ ರೂ. 48 ಸಾವಿರ ಹಣವನ್ನು ತೆಗೆದುಕೊಂಡು, ಕೊಲ್ಲುವ ಬೆದರಿಕೆಯನ್ನೂ ಹಾಕಿ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ಸಂಶುದ್ದೀನ್ ತಪ್ಪಿಸಿಕೊಳ್ಳಲು ಯತ್ನಿಸಿದಾಗ ದುಷ್ಕರ್ಮಿಗಳು ರಾಡ್ ಬೀಸಿದ್ದರಿಂದ ಸಂಶುದ್ದೀನ್ ಅವರ ಮೂಗು, ತಲೆಗೆ ಪೆಟ್ಟಾಗಿದೆ. ಹಲ್ಲೆಯಿಂದ ಸಂಶುದ್ದೀನ್ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ನಂತರ ಅನಾಸ್ ಅವರು ಸಂಶುದ್ದೀನ್ ಅವರನ್ನು ಬಣಕಲ್‌ನ ಸಾಯಿ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಬೇರೆ ವಾಹನದಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ದಾಖಲಿಸಿದ್ದಾರೆ. ಮೇ 7 ರಂದು ಬಣಕಲ್ ಪೊಲೀಸರು ಮಂಗಳೂರಿಗೆ ತೆರಳಿ ಹಲ್ಲೆಗೊಳಗಾದ ಸಂಶುದ್ದೀನ್ ಅವರಿಂದ ಹೇಳಿಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ. ವಿನಾಕಾರಣ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಸಂಶುದ್ದೀನ್ ಪೊಲೀಸರಿಗೆ ನೀಡಿದ ದೂರಿನ ಮೂಲಕ ತಿಳಿಸಿದ್ದಾರೆ.

Related posts

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya
error: Content is protected !!