September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

ಬೆಳ್ತಂಗಡಿ: ಕಾರಿನಲ್ಲಿ ಮಲಗಿದ್ದವರ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಸಂಶುದ್ದೀನ್ ಎಂಬುವವರು ಕಳೆದ ಮೇ 3ರಂದು ರಾತ್ರಿ ತನ್ನ ಕಾರಿನಲ್ಲಿ ಅನಾಸ್ ಎಂಬವರೊಂದಿಗೆ ಮೂಡಿಗೆರೆ ಪಟ್ಟಣದ ಹ್ಯಾಂಡ್‌ಪೋಸ್ಟ್‌ಗೆ ಬಾಳೆಕಾಯಿ ಖರೀದಿಗೆ ತೆರಳಿದ್ದರು. ಮಾರ್ಗಮಧ್ಯೆ ಕೊಟ್ಟಿಗೆಹಾರದಲ್ಲಿ ಕಾರು ಚಾಲಕ ಸಂಶುದ್ದೀನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಕಾರನ್ನು ನಿಲ್ಲಿಸಿ ವಿಶ್ರಾಂತಿ ಪಡೆಯಲು ಕಾರಿನಲ್ಲೇ ಮಲಗಿದ್ದರು. ಮಧ್ಯರಾತ್ರಿ ಕಾರಿನ ಬಳಿಗೆ 4 ಬೈಕ್‌ಗಳಲ್ಲಿ ಬಂದ 8 ಮಂದಿ ಯುವಕರ ಗುಂಪು ದಿಢೀರ್ ಕಾರಿನ ಮೇಲೆ ದಾಳಿ ಮಾಡಿ ಬಾಟಲಿ, ಕಲ್ಲು, ರಾಡ್‌ಗಳಿಂದ ಕಾರಿನ ಗ್ಲಾಸ್ ಒಡೆದು ಹಾಕಿದ್ದಲ್ಲದೇ ಕಾರಿನೊಳಗಿದ್ದ ಸಂಶುದ್ದೀನ್ ಹಾಗೂ ಅನಾಸ್ ಅವರಿಗೆ ಹಲ್ಲೆ ಮಾಡಿದ್ದಾರೆ.

ಈ ವೇಳೆ ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿದ್ದ ರೂ. 48 ಸಾವಿರ ಹಣವನ್ನು ತೆಗೆದುಕೊಂಡು, ಕೊಲ್ಲುವ ಬೆದರಿಕೆಯನ್ನೂ ಹಾಕಿ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ಸಂಶುದ್ದೀನ್ ತಪ್ಪಿಸಿಕೊಳ್ಳಲು ಯತ್ನಿಸಿದಾಗ ದುಷ್ಕರ್ಮಿಗಳು ರಾಡ್ ಬೀಸಿದ್ದರಿಂದ ಸಂಶುದ್ದೀನ್ ಅವರ ಮೂಗು, ತಲೆಗೆ ಪೆಟ್ಟಾಗಿದೆ. ಹಲ್ಲೆಯಿಂದ ಸಂಶುದ್ದೀನ್ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ನಂತರ ಅನಾಸ್ ಅವರು ಸಂಶುದ್ದೀನ್ ಅವರನ್ನು ಬಣಕಲ್‌ನ ಸಾಯಿ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಬೇರೆ ವಾಹನದಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ದಾಖಲಿಸಿದ್ದಾರೆ. ಮೇ 7 ರಂದು ಬಣಕಲ್ ಪೊಲೀಸರು ಮಂಗಳೂರಿಗೆ ತೆರಳಿ ಹಲ್ಲೆಗೊಳಗಾದ ಸಂಶುದ್ದೀನ್ ಅವರಿಂದ ಹೇಳಿಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ. ವಿನಾಕಾರಣ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಸಂಶುದ್ದೀನ್ ಪೊಲೀಸರಿಗೆ ನೀಡಿದ ದೂರಿನ ಮೂಲಕ ತಿಳಿಸಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya
error: Content is protected !!