25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಪರಿಕಲ್ಪನೆಯೊಂದಿಗೆ ಸುಮಾರು 82 ಅಶಕ್ತ ಬಡಕುಟುಂಬಗಳಿಗೆ ಸಹಾಯಹಸ್ತ ನೀಡಿ ಯುವಕರ ಸ್ಪೂರ್ತಿಯ ಚಿಲುಮೆಯಾದ “ವೀರಾಂಜನೇಯ ಸೇವಾ ಸಮಿತಿ” ವತಿಯಿಂದ 78, 79ನೇ ಸೇವಾಯೋಜನೆಯನ್ನು ಎರಡು ಬಡಕುಟುಂಬಕ್ಕೆ ಸಹಾಯಹಸ್ತ ನೀಡಲಾಯಿತು.

78ನೇ ಸೇವಾಯೋಜನೆಯ ಹಸ್ತಾಂತರ:-
ಕಡಬ ತಾಲೂಕಿನ ಏನೇಕಲ್ಲು ಗ್ರಾಮದ 4 ವರ್ಷ ಪ್ರಾಯದ ವಂಶಿ ಎಂಬ ಪುಟ್ಟ ಕಂದಮ್ಮ ಕಳೆದ ಎರಡು ತಿಂಗಳುಗಳಿಂದ blood ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಳು. ಇವಳು ಕೆಎಂಸಿ ಹಾಸ್ಪಿಟಲ್ ಅತ್ತಾವರದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದುವರೆಗೆ ಅಂದಾಜು 4 ಲಕ್ಷದವರೆಗೆ ಹಾಸ್ಪಿಟಲ್ ವೆಚ್ಚವನ್ನು ಭರಿಸಿರುತ್ತಾರೆ. ಮುಂದಿನ ಚಿಕಿತ್ಸೆ ನಡೆಸಲು 15 ಲಕ್ಷಕ್ಕಿಂತಲೂ ಅಧಿಕ ಹಣದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ. ಈ ಬಡಕುಟುಂಬದ ಕಷ್ಟವನ್ನು ಗುರುತಿಸಿದ ಶ್ರೀ ವೀರಾಂಜನೇಯ ಸೇವಾ ಸಮಿತಿಯು ತಮ್ಮ ತಂಡದಿಂದ ಸಂಗ್ರಹಿಸಿದ 12,000ರೂ ಸಹಾಯಧನದ ಚೆಕ್ಕನ್ನು ತಂಡದ ಸಹೋದರರ ಸಮ್ಮುಖದಲ್ಲಿ ವಂಶಿ ಇವರ ತಂದೆ ಕೈಯಲ್ಲಿ ಸಹಾಯಧನವನ್ನು ಹಸ್ತಾಂತರಿಸಲಾಯಿತು.

79ನೇ ಸೇವಾಯೋಜನೆಯ ಹಸ್ತಾಂತರ:-
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ನಿವಾಸಿಯಾದ ಗೌತಮ್ ಇವರು, ರಸ್ತೆ ಅಪಘಾತಕ್ಕೊಳಗಾಗಿ ತನ್ನ ಹೊಟ್ಟೆಗೆ ಬಲವಾಗಿ ಪೆಟ್ಟು ಬಿದ್ದು ಪ್ರಸ್ತುತ ಕೆ.ಎಸ್ ಹೆಗ್ಡೆ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗಾಗಿ ಸುಮಾರು 2 ಲಕ್ಷಕ್ಕೂ ಅಧಿಕ ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿರುತ್ತಾರೆ. ಇವರ ತಂದೆ ಮತ್ತು ತಾಯಿ ಇಬ್ಬರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದು ಮಗನ ಚಿಕಿತ್ಸಾ ವೆಚ್ಚ ಭರಿಸಲು ಕಂಗಾಲಾಗಿದ್ದರು. ಈ ಬಡಕುಟುಂಬದ ಕಷ್ಟವನ್ನು ಗುರುತಿಸಿದ ಶ್ರೀ ವೀರಾಂಜನೇಯ ಸೇವಾ ಸಮಿತಿಯು ತಮ್ಮ ತಂಡದಿಂದ ಸಂಗ್ರಹಿಸಿದ 12,000ರೂ ಸಹಾಯಧನದ ಚೆಕ್ಕನ್ನು ತಂಡದ ಸಹೋದರರ ಸಮ್ಮುಖದಲ್ಲಿ ಗೌತಮ್ ಇವರ ತಾಯಿಯ ಕೈಯಲ್ಲಿ ಸಹಾಯಧನವನ್ನು ಹಸ್ತಾಂತರಿಸಲಾಯಿತು.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!