September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು

.ಮೃತರು ಪತ್ನಿ ಸುಮಾ ಆರ್.ಆಚಾರ್,ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆ‌ರ್.,ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆ‌ರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.ಡಾ| ಪಾಲ್ತಾಡಿಯವರ ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಮೇ 8ರಂದು ಅಂತ್ಯ ಕ್ರಿಯೆ ನಡೆಯಲಿದೆ.

Related posts

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya
error: Content is protected !!