July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

ಬೆಳ್ತಂಗಡಿ: ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೇ 21 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.


ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯ, ಬಂಟ್ವಾಳ ತಾಲೂಕಿನ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯಲ್ಲಿರುವ ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ವಿಟ್ಲದ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಹಳೆಕೋಟೆಯಲ್ಲಿರುವ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಡಂತ್ಯಾರುವಿನ ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ.


ಅರ್ಹತೆ ಹಾಗೂ ಷರತ್ತುಗಳು:
ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. (ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು), ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳಿಗೆ ಮೀರಿರಬಾರದು. (2023-24 ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), ಜನನ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು. 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ. 60% ಅಂಕ ಪಡೆದಿರಬೇಕು.


ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಹಾಗೂ ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ಲಗತ್ತ್ತೀಕರಿಸುವುದು, ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ, ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸಲಾಗುವುದು. ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡುವುದು. ಗರಿಷ್ಠ ರೂ. ೭೫,೦೦೦/- ಶಾಲಾ ಶುಲ್ಕವನ್ನು ಸರಕಾರದಿಂದ ಭರಿಸಲಾಗುವುದು. (ಶಾಲೆಯ ಕಡ್ಡಾಯ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರ ಭತ್ಯೆಗಳನ್ನು ಒಳಗೊಂಡಿರುತ್ತದೆ), ವಿದ್ಯಾರ್ಥಿಯ ಬ್ಯಾಂಕ್ ಪಾಸ್‌ಪುಸ್ತಕದ ಜೆರಾಕ್ಸ್ ಪ್ರತಿ. ಅಪೂರ್ಣ ಅರ್ಜಿ, ತಡವಾಗಿ ಬಂದ ಅರ್ಜಿ ಹಾಗೂ ನಿಬಂಧನೆಗಳನ್ನು ಪೂರೈಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.


ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ದೂ.ಸಂಖ್ಯೆ: 0824-2451269 ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!