22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!