25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!