23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮೋಟಾರು ಸೈಕಲ್ ಸ್ಕಿಡ್ ಯಾಗಿ ಬಿದ್ದು ಗಾಯಗೊಂಡ ಘಟನೆ ಮೇ 6 ರಂದು ನಡೆದಿದೆ.

ರೆಖ್ಯಾ ನಿವಾಸಿ ನವೀನ್‌ ನೀಡಿದ ದೂರಿನಂತೆ ಮೇ 06 ರಂದು ನವೀನ್ ರವರ ದೊಡ್ಡಪ್ಪನ ಮಗ ಮನೀಷ್ ರವರು ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್‌ ನ ಮೋಟಾರು ಸೈಕಲ್ ಕೆಎ-21-ಇಎ-1440 ನೇಯದು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ವಿಚಾರ ತಿಳಿದಂತೆ ನವೀನ್ ಮತ್ತು ಅವರ ದೊಡ್ಡಪ್ಪ ಉಲಹನ್ನನ್ ರವರು ಸ್ಥಳಕ್ಕೆ ಹೋಗಿ ಮನೀಷ್ ರವರನ್ನು ಚಿಕಿತ್ಸೆಯ ಬಗ್ಗೆ ನೆಲ್ಯಾಡಿ ಆಶ್ವಿನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಈ ಆಪಘಾತದ ಬಗ್ಗೆ ವಿಚಾರವನ್ನು ತಿಳಿಯಲಾಗಿ ಮೇ 06 ರಂದು ಮದ್ಯಾಹ್ನ ಕೌಕ್ರಾಡಿ ಗ್ರಾಮದ ಪೆರಿಯ ಶಾಂತಿ ಎಂಬಲ್ಲಿ ರಾ ಹೇ 75 ರಲ್ಲಿ ಮನೀಷ್ ನು ಅವನ ಮೋಟಾರು ಸೈಕಲ್ ನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಸವಾರಿ ಮಾಡಿದ್ದರಿಂದ ಮೋಟಾರು ಸೈಕಲ್ ಸ್ಕಿಡ್ ಆಗಿ ಬಿದ್ದು ಗಂಭೀರ ಸ್ವರೂಪದ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ:54/2024 ಕಲಂ:279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya
error: Content is protected !!