ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Leave a Comment

error: Content is protected !!