ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!