April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ. ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು. ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!