September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

ಬೆಳ್ತಂಗಡಿ: ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿ, ದಕ್ಷಿಣ ಕನ್ನಡದ ಅಜಾತಶತ್ರು, ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ, ಹಲವು ಮಹತ್ತರ ಯೋಜನೆಗಳನ್ನು ತಂದ, ರಾಜಕಾರಣದಲ್ಲಿ ಮಾದರಿ ವ್ಯಕ್ತಿಯಾಗಿ ಬೆಳೆದು, ಮುಂದಿನ ಯುವ ರಾಜಕಾರಣಿಗಳಿಗೆ ಸ್ಫೂರ್ತಿಯ ಚಿಲುಮೆಯಾಗಿ, ಪ್ರೇರಣಾದಾಯಿಯಾಗಿ, ಆದರ್ಶಪ್ರಾಯಾರಾಗಿ, ನಿಲ್ಲಬಲ್ಲ ನೇರ ನಡೆ ನುಡಿಯ, ಪ್ರಾಮಾಣಿಕ, ಪ್ರಖರ ಮಾತಿನ ಮಲ್ಲ, ಬೆಳ್ತಂಗಡಿಯ ಗಂಡೆದೆಯ ನಾಯಕ ರಾಗಿದ್ದ ಹಿರಿಯರಾದ ಕೆ.ವಸಂತ ಬಂಗೇರ ನಿಧನದ ಸುದ್ದಿ ಅತೀವ ನೋವು ತಂದಿದೆ.

ಬೆಳ್ತಂಗಡಿ ತಾಲೂಕಿಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಬೆಳ್ತಂಗಡಿಗೆ ತುಂಬಲಾರದ ನಷ್ಟ. ಹಿರಿಯರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಭಾರತೀಯ ಮಾಜ್ದೂರು ಸಂಘ ದಕ ಜಿಲ್ಲಾಧ್ಯಕ್ಷ, ನ್ಯಾಯವಾದಿ ಅನಿಲ್ ಕುಮಾರ್ ಯು ಸಂತಾಪ ಸೂಚಿಸಿದ್ದಾರೆ.

Related posts

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!