22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

ಬೆಳ್ತಂಗಡಿ: ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿ, ದಕ್ಷಿಣ ಕನ್ನಡದ ಅಜಾತಶತ್ರು, ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ, ಹಲವು ಮಹತ್ತರ ಯೋಜನೆಗಳನ್ನು ತಂದ, ರಾಜಕಾರಣದಲ್ಲಿ ಮಾದರಿ ವ್ಯಕ್ತಿಯಾಗಿ ಬೆಳೆದು, ಮುಂದಿನ ಯುವ ರಾಜಕಾರಣಿಗಳಿಗೆ ಸ್ಫೂರ್ತಿಯ ಚಿಲುಮೆಯಾಗಿ, ಪ್ರೇರಣಾದಾಯಿಯಾಗಿ, ಆದರ್ಶಪ್ರಾಯಾರಾಗಿ, ನಿಲ್ಲಬಲ್ಲ ನೇರ ನಡೆ ನುಡಿಯ, ಪ್ರಾಮಾಣಿಕ, ಪ್ರಖರ ಮಾತಿನ ಮಲ್ಲ, ಬೆಳ್ತಂಗಡಿಯ ಗಂಡೆದೆಯ ನಾಯಕ ರಾಗಿದ್ದ ಹಿರಿಯರಾದ ಕೆ.ವಸಂತ ಬಂಗೇರ ನಿಧನದ ಸುದ್ದಿ ಅತೀವ ನೋವು ತಂದಿದೆ.

ಬೆಳ್ತಂಗಡಿ ತಾಲೂಕಿಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಬೆಳ್ತಂಗಡಿಗೆ ತುಂಬಲಾರದ ನಷ್ಟ. ಹಿರಿಯರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಭಾರತೀಯ ಮಾಜ್ದೂರು ಸಂಘ ದಕ ಜಿಲ್ಲಾಧ್ಯಕ್ಷ, ನ್ಯಾಯವಾದಿ ಅನಿಲ್ ಕುಮಾರ್ ಯು ಸಂತಾಪ ಸೂಚಿಸಿದ್ದಾರೆ.

Related posts

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya
error: Content is protected !!