27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya
error: Content is protected !!