July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು ಹೆಸರಾಗಿರುವ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಸೀರೋಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂತಾಪವನ್ನು ಸೂಚಿಸಿದೆ.

ಬೆಳ್ತಂಗಡಿ ತಾಲೂಕಿನ ಸೀರೋಮಲಬಾರ್ ಧರ್ಮಿಯರು ಒಂದು ರಾಜಕೀಯ ನೆಲೆಯನ್ನು ಕಂಡುಕೊಳ್ಳುವಲ್ಲಿ ಶ್ರೀ ವಸಂತ ಬಂಗೇರರ ಕೊಡುಗೆ ಅಪಾರ ಎಂದು ನಿರ್ದೇಶಕರಾಗಿರುವ ವಂದನಿಯ ಫಾ.ಶಾಜಿ ಮಾತ್ಯು ತಿಳಿಸಿದರು. ಜೋಯ್ ಟಿ ಜೆ ಅವರನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷ ರನ್ನಾಗಿ ಮಾಡುವ ಮೂಲಕ ತಾಲೂಕಿನ ರಾಜಕೀಯ ಇತಿಹಾಸದಲ್ಲಿ ಸೀರೋ ಮಲಬಾರ್ ಕ್ರೈಸ್ತರಿಗೆ ಮರೆಯಲಾರದ ಕ್ಷಣ ಎಂದು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ ಸಂದೇಶ ದಲ್ಲಿ ತಿಳಿಸಿದೆ.ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ, ಪ್ರದಾನ ಕಾರ್ಯದರ್ಶಿ ಸೇಬಾಸ್ಟಿನ್ ಎಂ ಜೆ, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಕೋಶಾಧಿಕಾರಿ ಜಿಮ್ಮಿ ಗುಂಡ್ಯ, ಸದಸ್ಯರಾದ ಜಾರ್ಜ್ ಟಿ ವಿ ಬೆನ್ನಿ ಮುದೂರು, ಶ್ರೀಮತಿ ಅಲ್ಫೋನ್ಸ ಬೆಳ್ತಂಗಡಿ,ರೀನಾ ಶಿಬಿ ಧರ್ಮಸ್ಥಳ, ಮಾತ್ಯು ಮೂರ್ನಾಡ್ ಸಂತಾಪ ಸೂಚಿಸಿದರು

Related posts

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya
error: Content is protected !!