ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ ಅವರು ಅಭಿನಂದಿಸಿದ್ದಾರೆ.

Leave a Comment

error: Content is protected !!