September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಮೇ.9 ರಂದು ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 75 ರಷ್ಟು ಮರಕ್ಕೆ ಹಾನಿ ಉಂಟಾಗಿದೆ.

ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಬೆಂಕಿ ಉಗುಳಲ್ಪಟ್ಟು ತರಗೆಲೆಗೆ ಹತ್ತಿಕೊಂಡು ಬೆಂಕಿ ರಬ್ಬರ್ ತೋಟಕ್ಕೆ ಆವರಿಸಿದೆ. ಗ್ರಾ.ಪಂ ಪಿಡಿಒ‌ ಅವರು ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದಂತೆ ಧಾವಿಸಿ ಬಂದು ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿಗಳಾದ ರತನ್, ಶ್ರವಣ್, ಮುಹಮ್ಮದ್ ಸಾಬ್, ಆದಿಲ್ ಮತ್ತು ವೆಂಕಣ್ಣ ಇವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!