ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರದ ವಿಧಿ-ವಿಧಾನಗಳು ಇಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ಜರುಗಿತು.


ಬಳಿಕ ಬೆಳ್ತಂಗಡಿಯ ನಗರದ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ತಾಲೂಕು ಕ್ರೀಡಾಂಗಣದ ತನಕ ನಡೆಯಲಿದೆ. ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನ ತನಕ ಅವಕಾಶ ನೀಡಲಾಗಿದ್ದು, ಬೆಳ್ತಂಗಡಿ ನಗರದಲ್ಲಿ ವರ್ತಕರು ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಮಾಜಿ ಶಾಸಕರಿಗೆ ಗೌರವ ಸಲ್ಲಿಸಿದರು. ಸಂಜೆ ವೇಳೆ ಅವರ ಹುಟ್ಟೂರು ಕುವೆಟ್ಟು ಗ್ರಾಮದ ಕೇದೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರ ಮನೆಗೆ ಶಾಸಕ ಹರೀಶ್ ಪೂಂಜ, ರಕ್ಷಿತ್ ಶಿವರಾಂ, ವಸಂತ ಸಾಲಿಯಾನ್, ಪ್ರಶಾಂತ್ ಪ್ರತಿಮಾನಿಲಯ, ಜಯಂತ ಕೋಟ್ಯಾನ್, ಮುಗುಳಿ ನಾರಾಯಣ ರಾವ್, ಜಯವಿಕ್ರಮ್, ಪದ್ಮನಾಭ ಮಾಣಿಂಜ, ನಿತೀಶ್ ಕೋಟ್ಯಾನ್, ಸಂತೋಷ್‌ಕುಮಾರ್ ಕಾಪಿನಡ್ಕ, ಧರಣೇಂದ್ರ ಕುಮಾರ್, ಮನೋಹರ ಇಳಂತಿಲ, ಶೇಖರ ಕುಕ್ಕೇಡಿ, ಯೋಗೀಶ್ ಕುಮಾರ್ ನಡಕರ, ಜೈಸನ್, ರಾಜೇಶ್ ಮೂಡುಕೋಡಿ, ಡಾ.ರಾಜರಾಮ್, ಜಗದೀಶ್ ಡಿ. ರಾಜಶೇಖರ ರೈ, ಚಿದಾನಂದ ಇಡ್ಯ, ಸತೀಶ್ ಕಾಶಿಪಟ್ಣ, ರತ್ನಾಕರ ಬುಣ್ಣನ್, ವಸಂತ ಬಿ.ಕೆ, ಜಯಾನಂದ ಲಾಯಿಲ, ಡಾ.ಜಗನ್ನಾಥ್, ಡಾ. ಸುಧೀರ್ ಪ್ರಭು ಸೇರಿದಂತೆ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya
error: Content is protected !!