25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಅಶ್ರಿಫಾ ಅವರು ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಪೂರ್ಣ 100 ಅಂಕಗಳನ್ನು ಪಡೆದರೆ,
ಇಂಗ್ಲೀಷ್ ನಲ್ಲಿ 118, ವಿಜ್ಞಾನದಲ್ಲಿ 98 ಮತ್ತು ಗಣಿತದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ.

ಅಶ್ರಿಫಾ ಫಾತಿಮಾ ಅವರು ನೆರಿಯ ಗ್ರಾಮದ ಪರಪ್ಪು ನಿವಾಸಿ ಟಿಂಬರ್ ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಅಸ್ಮತ್ ದಂಪತಿಯ ಪುತ್ರಿ.

ಅಶ್ರಿಫಾ ಫಾತಿಮಾ ಅವರು ಕಲಿಕೆ ಮಾತ್ರವಲ್ಲದೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ವಿಚಾರದಲ್ಲೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

Related posts

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!