23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಮೇ.9 ರಂದು ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 75 ರಷ್ಟು ಮರಕ್ಕೆ ಹಾನಿ ಉಂಟಾಗಿದೆ.

ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಬೆಂಕಿ ಉಗುಳಲ್ಪಟ್ಟು ತರಗೆಲೆಗೆ ಹತ್ತಿಕೊಂಡು ಬೆಂಕಿ ರಬ್ಬರ್ ತೋಟಕ್ಕೆ ಆವರಿಸಿದೆ. ಗ್ರಾ.ಪಂ ಪಿಡಿಒ‌ ಅವರು ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದಂತೆ ಧಾವಿಸಿ ಬಂದು ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿಗಳಾದ ರತನ್, ಶ್ರವಣ್, ಮುಹಮ್ಮದ್ ಸಾಬ್, ಆದಿಲ್ ಮತ್ತು ವೆಂಕಣ್ಣ ಇವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!