23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರದ ವಿಧಿ-ವಿಧಾನಗಳು ಇಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ಜರುಗಿತು.


ಬಳಿಕ ಬೆಳ್ತಂಗಡಿಯ ನಗರದ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ತಾಲೂಕು ಕ್ರೀಡಾಂಗಣದ ತನಕ ನಡೆಯಲಿದೆ. ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನ ತನಕ ಅವಕಾಶ ನೀಡಲಾಗಿದ್ದು, ಬೆಳ್ತಂಗಡಿ ನಗರದಲ್ಲಿ ವರ್ತಕರು ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಮಾಜಿ ಶಾಸಕರಿಗೆ ಗೌರವ ಸಲ್ಲಿಸಿದರು. ಸಂಜೆ ವೇಳೆ ಅವರ ಹುಟ್ಟೂರು ಕುವೆಟ್ಟು ಗ್ರಾಮದ ಕೇದೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರ ಮನೆಗೆ ಶಾಸಕ ಹರೀಶ್ ಪೂಂಜ, ರಕ್ಷಿತ್ ಶಿವರಾಂ, ವಸಂತ ಸಾಲಿಯಾನ್, ಪ್ರಶಾಂತ್ ಪ್ರತಿಮಾನಿಲಯ, ಜಯಂತ ಕೋಟ್ಯಾನ್, ಮುಗುಳಿ ನಾರಾಯಣ ರಾವ್, ಜಯವಿಕ್ರಮ್, ಪದ್ಮನಾಭ ಮಾಣಿಂಜ, ನಿತೀಶ್ ಕೋಟ್ಯಾನ್, ಸಂತೋಷ್‌ಕುಮಾರ್ ಕಾಪಿನಡ್ಕ, ಧರಣೇಂದ್ರ ಕುಮಾರ್, ಮನೋಹರ ಇಳಂತಿಲ, ಶೇಖರ ಕುಕ್ಕೇಡಿ, ಯೋಗೀಶ್ ಕುಮಾರ್ ನಡಕರ, ಜೈಸನ್, ರಾಜೇಶ್ ಮೂಡುಕೋಡಿ, ಡಾ.ರಾಜರಾಮ್, ಜಗದೀಶ್ ಡಿ. ರಾಜಶೇಖರ ರೈ, ಚಿದಾನಂದ ಇಡ್ಯ, ಸತೀಶ್ ಕಾಶಿಪಟ್ಣ, ರತ್ನಾಕರ ಬುಣ್ಣನ್, ವಸಂತ ಬಿ.ಕೆ, ಜಯಾನಂದ ಲಾಯಿಲ, ಡಾ.ಜಗನ್ನಾಥ್, ಡಾ. ಸುಧೀರ್ ಪ್ರಭು ಸೇರಿದಂತೆ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya
error: Content is protected !!