25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರದ ವಿಧಿ-ವಿಧಾನಗಳು ಇಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ಜರುಗಿತು.


ಬಳಿಕ ಬೆಳ್ತಂಗಡಿಯ ನಗರದ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ತಾಲೂಕು ಕ್ರೀಡಾಂಗಣದ ತನಕ ನಡೆಯಲಿದೆ. ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನ ತನಕ ಅವಕಾಶ ನೀಡಲಾಗಿದ್ದು, ಬೆಳ್ತಂಗಡಿ ನಗರದಲ್ಲಿ ವರ್ತಕರು ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಮಾಜಿ ಶಾಸಕರಿಗೆ ಗೌರವ ಸಲ್ಲಿಸಿದರು. ಸಂಜೆ ವೇಳೆ ಅವರ ಹುಟ್ಟೂರು ಕುವೆಟ್ಟು ಗ್ರಾಮದ ಕೇದೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರ ಮನೆಗೆ ಶಾಸಕ ಹರೀಶ್ ಪೂಂಜ, ರಕ್ಷಿತ್ ಶಿವರಾಂ, ವಸಂತ ಸಾಲಿಯಾನ್, ಪ್ರಶಾಂತ್ ಪ್ರತಿಮಾನಿಲಯ, ಜಯಂತ ಕೋಟ್ಯಾನ್, ಮುಗುಳಿ ನಾರಾಯಣ ರಾವ್, ಜಯವಿಕ್ರಮ್, ಪದ್ಮನಾಭ ಮಾಣಿಂಜ, ನಿತೀಶ್ ಕೋಟ್ಯಾನ್, ಸಂತೋಷ್‌ಕುಮಾರ್ ಕಾಪಿನಡ್ಕ, ಧರಣೇಂದ್ರ ಕುಮಾರ್, ಮನೋಹರ ಇಳಂತಿಲ, ಶೇಖರ ಕುಕ್ಕೇಡಿ, ಯೋಗೀಶ್ ಕುಮಾರ್ ನಡಕರ, ಜೈಸನ್, ರಾಜೇಶ್ ಮೂಡುಕೋಡಿ, ಡಾ.ರಾಜರಾಮ್, ಜಗದೀಶ್ ಡಿ. ರಾಜಶೇಖರ ರೈ, ಚಿದಾನಂದ ಇಡ್ಯ, ಸತೀಶ್ ಕಾಶಿಪಟ್ಣ, ರತ್ನಾಕರ ಬುಣ್ಣನ್, ವಸಂತ ಬಿ.ಕೆ, ಜಯಾನಂದ ಲಾಯಿಲ, ಡಾ.ಜಗನ್ನಾಥ್, ಡಾ. ಸುಧೀರ್ ಪ್ರಭು ಸೇರಿದಂತೆ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya
error: Content is protected !!