25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

ಗುರುವಾಯನಕೆರೆ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2ನೇ ಬ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ರವರನ್ನು ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಮೇ 9ರಂದು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಚಿನ್ಮಯ್ ಜಿ.ಕೆ. ರವರ ತಂದೆ ಬೆಳ್ತಂಗಡಿ ಸರಕಾರಿ ಪ.ಪೂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕ, ಗಣೇಶ್ ಭಟ್ ರವರು ಹಾಜರಿದ್ದು, ಮಗನ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ಚಿನ್ಮಯ್ ಜಿ.ಕೆ 625 ಕ್ಕೆ 624 ಅಂಕ ಗಳಿಸಿದ್ದು, ಈ ಅಮೋಘ ಸಾಧನೆ ಮಾಡಿದ ರಾಜ್ಯದ ಏಳೇ ಏಳು ಪ್ರತಿಭಾವಂತರಲ್ಲಿ ಒಬ್ಬನಾಗಿದ್ದಾನೆ. ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಾಧನೆ ಗೈದಿದ್ದಾರೆ. ಚಿನ್ಮಯ್ ಜಿ.ಕೆ ಪ್ರಸ್ತುತ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಪ್ರೇರಣಾ ಫೌಂಡೇಶನ್ ಕೋಚಿಂಗ್ ಪಡೆದುಕೊಳ್ಳುತ್ತಿದ್ದು, ಅಲ್ಲಿನ ಎಕ್ಸ್ಪರ್ಟೈಜ್ ಟೆಸ್ಟ್ಗಳಲ್ಲಿಯೂ ನಿರಂತರವಾಗಿ “ಸ್ಪಾರ್ ಪರ್ಫಾರ್ಮರ್” ಆಗಿ ಹೊರಹೊಮ್ಮಿರುವುದು ವಿಶೇಷ. ಚಿನ್ಮಯ್ ಜಿ.ಕೆ ಜೆ.ಇ.ಇ ಅಡ್ವಾನ್ಸ್ನಲ್ಲಿ ಅರ್ಹತೆ ಗಿಟ್ಟಿಸಿಕೊಂಟು ಐ.ಐ.ಟಿ. ಗೆ ಪ್ರವೇಶ ಪಡೆಯುವ ಮಹತ್ವಾಕಾಂಕ್ಷೆ ಹೊಂದಿದ್ದಾನೆ.

ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ರವರೊಂದಿಗೆ ವಿದ್ವತ್ ಪ್ರೇರಣಾ ಫೌಂಡೇಶನ್ ಕೋಚಿಂಗ್ ವಿದ್ಯಾರ್ಥಿಗಳಾದ 617 ಅಂಕ ಗಳಿಸಿದ ಅಜಿತ್ ಎಚ್.ಸಿ., 613 ಅಂಕ ಗಳಿಸಿರುವ ಸಿಮ್ರಾ ಪರ್ವೀನ್, 602 ಅಂಕ ಗಳಿಸಿರುವ ದ್ರವೀಣ್ ಭಟ್, ಹಾಗೂ 597 ಅಂಕಗಳಿಸಿರುವ ಯಶಸ್ವಿನಿ ಜೆ.ಬಿ ಯವರನ್ನೂ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಖಜಾಂಜಿ ಎಂ.ಕೆ ಕಾಶಿನಾಥ್ ರವರು ಸನ್ಮಾನಿಸಿ ಗೌರವಿಸಿದರು.

Related posts

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya
error: Content is protected !!