September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಮೇ.9 ರಂದು ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 75 ರಷ್ಟು ಮರಕ್ಕೆ ಹಾನಿ ಉಂಟಾಗಿದೆ.

ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಬೆಂಕಿ ಉಗುಳಲ್ಪಟ್ಟು ತರಗೆಲೆಗೆ ಹತ್ತಿಕೊಂಡು ಬೆಂಕಿ ರಬ್ಬರ್ ತೋಟಕ್ಕೆ ಆವರಿಸಿದೆ. ಗ್ರಾ.ಪಂ ಪಿಡಿಒ‌ ಅವರು ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದಂತೆ ಧಾವಿಸಿ ಬಂದು ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿಗಳಾದ ರತನ್, ಶ್ರವಣ್, ಮುಹಮ್ಮದ್ ಸಾಬ್, ಆದಿಲ್ ಮತ್ತು ವೆಂಕಣ್ಣ ಇವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya
error: Content is protected !!