25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಮೇ.9 ರಂದು ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 75 ರಷ್ಟು ಮರಕ್ಕೆ ಹಾನಿ ಉಂಟಾಗಿದೆ.

ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಬೆಂಕಿ ಉಗುಳಲ್ಪಟ್ಟು ತರಗೆಲೆಗೆ ಹತ್ತಿಕೊಂಡು ಬೆಂಕಿ ರಬ್ಬರ್ ತೋಟಕ್ಕೆ ಆವರಿಸಿದೆ. ಗ್ರಾ.ಪಂ ಪಿಡಿಒ‌ ಅವರು ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದಂತೆ ಧಾವಿಸಿ ಬಂದು ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿಗಳಾದ ರತನ್, ಶ್ರವಣ್, ಮುಹಮ್ಮದ್ ಸಾಬ್, ಆದಿಲ್ ಮತ್ತು ವೆಂಕಣ್ಣ ಇವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!