ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Leave a Comment

error: Content is protected !!