April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರದ ವಿಧಿ-ವಿಧಾನಗಳು ಇಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ಜರುಗಿತು.


ಬಳಿಕ ಬೆಳ್ತಂಗಡಿಯ ನಗರದ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ತಾಲೂಕು ಕ್ರೀಡಾಂಗಣದ ತನಕ ನಡೆಯಲಿದೆ. ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಮಧ್ಯಾಹ್ನ ತನಕ ಅವಕಾಶ ನೀಡಲಾಗಿದ್ದು, ಬೆಳ್ತಂಗಡಿ ನಗರದಲ್ಲಿ ವರ್ತಕರು ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಮಾಜಿ ಶಾಸಕರಿಗೆ ಗೌರವ ಸಲ್ಲಿಸಿದರು. ಸಂಜೆ ವೇಳೆ ಅವರ ಹುಟ್ಟೂರು ಕುವೆಟ್ಟು ಗ್ರಾಮದ ಕೇದೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಅವರ ಮನೆಗೆ ಶಾಸಕ ಹರೀಶ್ ಪೂಂಜ, ರಕ್ಷಿತ್ ಶಿವರಾಂ, ವಸಂತ ಸಾಲಿಯಾನ್, ಪ್ರಶಾಂತ್ ಪ್ರತಿಮಾನಿಲಯ, ಜಯಂತ ಕೋಟ್ಯಾನ್, ಮುಗುಳಿ ನಾರಾಯಣ ರಾವ್, ಜಯವಿಕ್ರಮ್, ಪದ್ಮನಾಭ ಮಾಣಿಂಜ, ನಿತೀಶ್ ಕೋಟ್ಯಾನ್, ಸಂತೋಷ್‌ಕುಮಾರ್ ಕಾಪಿನಡ್ಕ, ಧರಣೇಂದ್ರ ಕುಮಾರ್, ಮನೋಹರ ಇಳಂತಿಲ, ಶೇಖರ ಕುಕ್ಕೇಡಿ, ಯೋಗೀಶ್ ಕುಮಾರ್ ನಡಕರ, ಜೈಸನ್, ರಾಜೇಶ್ ಮೂಡುಕೋಡಿ, ಡಾ.ರಾಜರಾಮ್, ಜಗದೀಶ್ ಡಿ. ರಾಜಶೇಖರ ರೈ, ಚಿದಾನಂದ ಇಡ್ಯ, ಸತೀಶ್ ಕಾಶಿಪಟ್ಣ, ರತ್ನಾಕರ ಬುಣ್ಣನ್, ವಸಂತ ಬಿ.ಕೆ, ಜಯಾನಂದ ಲಾಯಿಲ, ಡಾ.ಜಗನ್ನಾಥ್, ಡಾ. ಸುಧೀರ್ ಪ್ರಭು ಸೇರಿದಂತೆ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya
error: Content is protected !!