March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!