September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya
error: Content is protected !!