24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!